24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ಸೆ. 9ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಜಯ ಕುಮಾರ್ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ ರಾವ್ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ನಿವೃತ್ತಿ ಹೊಂದಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರಿಗೆ ಸನ್ಮಾನಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸ್ವಾಗತಿಸಿದರು, ಲೆಕ್ಕ ಸಹಾಯಕಿ ಪ್ರಮೀಳಾ ಜಮಾ ಖರ್ಚು ವಾಚಿಸಿದರು. ಸಿಬ್ಬಂದಿ ವಂದನಾ ಬಳ್ಳಾಲ್ ವರದಿ ವಾಚಿಸಿದರು. ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿದರು. ಗುಮಾಸ್ತ ಶೇಖರ್ ವಂದಿಸಿದರು. ಇತರ ಸಿಬ್ಬಂದಿಗಳು ಸಹಕರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!