23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾಯರ್ತಡ್ಕ: ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದ ಬೆಳ್ತಂಗಡಿ ತಾಲ್ಲೂಕು ಮಟ್ಟದ 17ರ ವಯೋಮಾನದೊಳಗಿನ ಮಕ್ಕಳ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಯರ್ತಡ್ಕ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಯಿತು.

ತಾಲ್ಲೂಕು ಮಟ್ಟದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ತಾಲ್ಲೂಕು ಕ್ರೀಡಾ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ಇವರು ದೀಪ ಬೆಳಗಿಸಿ ಉದ್ಘಾಟನೆಗೈದು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ಇವರು ಕ್ರೀಡಾಸ್ಫೂರ್ತಿಯಿಂದ ಆಟವಾಡುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತುಗಳನ್ನು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಸ್ಪರ್ಧೆಯಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ತಂಡಗಳು ಪರಸ್ಪರ ಸೆನಸಾಡಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಹಾಗೂ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಅಂತಿಮ ಸುತ್ತನ್ನು ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಜಯಗಳಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ವಿಜೇತ ತಂಡಗಳಿಗೆ ಹಾಗೂ ರನ್ನರ್ಸ್ ಆಪ್ ತಂಡಗಳಿಗೆ ಟ್ರೋಫಿ, ಪದಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಯಿತು. ಪಂದ್ಯಾಕೂಟದ ಯಶಸ್ವಿಗೆ ಶಿಕ್ಷಕರು, ಶಾಲಾ ಆಡಳಿತ ಸಮಿತಿ ಸದಸ್ಯರು, ದಾನಿಗಳು ಸಹಕಾರ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತರಬೇತು ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರಕಾಶ್ ಎ ಜೆ ಇವರನ್ನು ಪ್ರಶಂಶಿಲಾಯಿತು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya
error: Content is protected !!