ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾಯರ್ತಡ್ಕ: ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದ ಬೆಳ್ತಂಗಡಿ ತಾಲ್ಲೂಕು ಮಟ್ಟದ 17ರ ವಯೋಮಾನದೊಳಗಿನ ಮಕ್ಕಳ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಯರ್ತಡ್ಕ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಯಿತು.

ತಾಲ್ಲೂಕು ಮಟ್ಟದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ತಾಲ್ಲೂಕು ಕ್ರೀಡಾ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ಇವರು ದೀಪ ಬೆಳಗಿಸಿ ಉದ್ಘಾಟನೆಗೈದು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ಇವರು ಕ್ರೀಡಾಸ್ಫೂರ್ತಿಯಿಂದ ಆಟವಾಡುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತುಗಳನ್ನು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಸ್ಪರ್ಧೆಯಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ತಂಡಗಳು ಪರಸ್ಪರ ಸೆನಸಾಡಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಹಾಗೂ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಅಂತಿಮ ಸುತ್ತನ್ನು ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಜಯಗಳಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ವಿಜೇತ ತಂಡಗಳಿಗೆ ಹಾಗೂ ರನ್ನರ್ಸ್ ಆಪ್ ತಂಡಗಳಿಗೆ ಟ್ರೋಫಿ, ಪದಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಯಿತು. ಪಂದ್ಯಾಕೂಟದ ಯಶಸ್ವಿಗೆ ಶಿಕ್ಷಕರು, ಶಾಲಾ ಆಡಳಿತ ಸಮಿತಿ ಸದಸ್ಯರು, ದಾನಿಗಳು ಸಹಕಾರ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತರಬೇತು ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರಕಾಶ್ ಎ ಜೆ ಇವರನ್ನು ಪ್ರಶಂಶಿಲಾಯಿತು.

Related posts

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!