ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅವರು ವಿಮಾ ಪತ್ರ ಹಸ್ತಾಂತರಿಸಿ ಜಿಲ್ಲಾ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯಿಂದ ವಿಮಾ ಪ್ರೀಮಿ ಯಂನ್ನು ಭರಿಸಲಾಗುತ್ತದೆ. ರಿಲಯನ್ಸ್ ಸಂಸ್ಥೆಯ ಮೂಲಕ ವಿಮಾ ಹಣ ಪಾವತಿಯಾಗುತ್ತದೆ. ಬೆಳ್ತಂಗಡಿ, ಕಡಬ ಹಾಗೂ ಮೂಲ್ಕಿಯ ಪತ್ರಕರ್ತರ ಸಂಘದ ನಿವೇಶನದ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾತುಕತೆ ನಡೆಸಿರುವುದನ್ನು ವಿವರಿಸಿದರು. ಅಂಚೆ ಅಧಿಕಾರಿ ಸುಂದರ್ ಸಾಲಿಯಾನ್ ವಿಮಾ ನೋಂದಣಿ ಪ್ರಕ್ರಿಯೆ ನಡೆಸಿಕೊಟ್ಟರು.
ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ವಿಮಾ ಪ್ರಯೋಜನಗಳನ್ನು ತಿಳಿಸಿದರು. ತಾಲೂಕು ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ತುಕಾರಾಮ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರು ಉಪಸ್ಥಿತರಿದ್ದರು.













