May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅವರು ವಿಮಾ ಪತ್ರ ಹಸ್ತಾಂತರಿಸಿ ಜಿಲ್ಲಾ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯಿಂದ ವಿಮಾ ಪ್ರೀಮಿ ಯಂನ್ನು ಭರಿಸಲಾಗುತ್ತದೆ. ರಿಲಯನ್ಸ್ ಸಂಸ್ಥೆಯ ಮೂಲಕ ವಿಮಾ ಹಣ ಪಾವತಿಯಾಗುತ್ತದೆ. ಬೆಳ್ತಂಗಡಿ, ಕಡಬ ಹಾಗೂ ಮೂಲ್ಕಿಯ ಪತ್ರಕರ್ತರ ಸಂಘದ ನಿವೇಶನದ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾತುಕತೆ ನಡೆಸಿರುವುದನ್ನು ವಿವರಿಸಿದರು. ಅಂಚೆ ಅಧಿಕಾರಿ ಸುಂದರ್ ಸಾಲಿಯಾನ್ ವಿಮಾ ನೋಂದಣಿ ಪ್ರಕ್ರಿಯೆ ನಡೆಸಿಕೊಟ್ಟರು.

ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ವಿಮಾ ಪ್ರಯೋಜನಗಳನ್ನು ತಿಳಿಸಿದರು. ತಾಲೂಕು ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ, ಕಾರ್ಯದರ್ಶಿ ತುಕಾರಾಮ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya
error: Content is protected !!