25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅವರು ವಿಮಾ ಪತ್ರ ಹಸ್ತಾಂತರಿಸಿ ಜಿಲ್ಲಾ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯಿಂದ ವಿಮಾ ಪ್ರೀಮಿ ಯಂನ್ನು ಭರಿಸಲಾಗುತ್ತದೆ. ರಿಲಯನ್ಸ್ ಸಂಸ್ಥೆಯ ಮೂಲಕ ವಿಮಾ ಹಣ ಪಾವತಿಯಾಗುತ್ತದೆ. ಬೆಳ್ತಂಗಡಿ, ಕಡಬ ಹಾಗೂ ಮೂಲ್ಕಿಯ ಪತ್ರಕರ್ತರ ಸಂಘದ ನಿವೇಶನದ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾತುಕತೆ ನಡೆಸಿರುವುದನ್ನು ವಿವರಿಸಿದರು. ಅಂಚೆ ಅಧಿಕಾರಿ ಸುಂದರ್ ಸಾಲಿಯಾನ್ ವಿಮಾ ನೋಂದಣಿ ಪ್ರಕ್ರಿಯೆ ನಡೆಸಿಕೊಟ್ಟರು.

ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ವಿಮಾ ಪ್ರಯೋಜನಗಳನ್ನು ತಿಳಿಸಿದರು. ತಾಲೂಕು ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ, ಕಾರ್ಯದರ್ಶಿ ತುಕಾರಾಮ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya
error: Content is protected !!