July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

ಗುರುವಾಯನಕೆರೆ: ಪ್ರತಿಷ್ಠಿತ ವಿದ್ವತ್ ಪಿಯು ಕಾಲೇಜ್ ನಲ್ಲಿ ಇಂದು ” ಗುರುವಂದನಾ ” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕ ವೃಂದಕ್ಕೆ ಗೌರವ ಸಮರ್ಪಣೆ ಮಾಡಿದರು.

ಎಲ್ಲಾ ಶಿಕ್ಷಕರಿಗೂ ಪುಷ್ಪಗುಚ್ಛ ನೀಡಿ ಬರಮಾಡಿಕೊಂಡ ವಿದ್ಯಾರ್ಥಿಗಳು ನಂತರ ಪ್ರತಿ ಶಿಕ್ಷಕರಿಗೂ ಆರತಿ ಬೆಳಗುವುದರ ಮೂಲಕ ಅವರಿಗೆ ಸಮಾಜದಲ್ಲಿ ಇರುವ ಗೌರವದ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಬಹಳ ವಿಶೇಷವಾಗಿ ಮೂಡಿ ಬಂದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಮಾ. ಕೀರ್ತನ್ ಹಾಗೂ ಕು. ಸೃಷ್ಟಿ ರವರು ತಮ್ಮ ಜೀವನದ ಮೇಲೆ ಪ್ರಭಾವ ಬೀರಿದ ಶಿಕ್ಷಕರ ಗುಣಗಳನ್ನು ಕೊಂಡಾಡಿ, ಮಹಾದಾಸೆ ಹೊತ್ತು ಶಿಕ್ಷಣಾರ್ಥಿಗಳಾಗಿ ಬಂದ ಮಕ್ಕಳಿಗೆ ಶಿಕ್ಷಕರು ತಾಯಿ ಸಮಾನವಾಗಿ ಕಾಣುತ್ತಾರೆ ಎಂದರು.

ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಗುಣಗಾನ ಮಾಡಿ, ಆದರ್ಶ ಶಿಕ್ಷಕ ಹೇಗಿರಬೇಕೆಂಬುದನ್ನು ಒತ್ತಿ ಹೇಳಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆಯವರು, ಶಿಕ್ಷಕರು ಮಾಡಬಹುದಾದ ಚಮತ್ಕಾರಗಳ ಬಗ್ಗೆ ಪ್ರಸ್ತಾಪಿಸಿ ಒಬ್ಬ ಶಿಕ್ಷಕ ಹೇಗೆ ತಮ್ಮ ಮಕ್ಕಳು ತಮ್ಮನ್ನು ತಾವೇ ಮುನ್ನಡೆಸಿಕೊಳ್ಳುವ ಬಗೆಯನ್ನು ಅರ್ಥೈಸಿ ಅಳವಡಿಸಿಕೊಳ್ಳಲು ಪ್ರೇರೇಪಿಸಬಹುದು ಎಂಬುದನ್ನು ಮನೋಜ್ಞವಾಗಿ ಎಲ್ಲರ ಮುಂದಿಟ್ಟರು. ಮಕ್ಕಳೇ ಪ್ರಸ್ತುತಪಡಿಸಿದ ಶಿಕ್ಷಕರ ಸೇವೆಯನ್ನು ಕೊಂಡಾಡುವ ಸಮೂಹ ಗೀತೆ ಶಿಕ್ಷಕ ವೃತ್ತಿಯ ಸಾರ್ಥಕತೆಗೆ ಕೈಗನ್ನಡಿಯಂತಿತ್ತು. ಕರುನಾಡ ಕನ್ನಡ ಕಲಾಸಿರಿ ಬಳಗ ಬೆಂಗಳೂರು ಇವರ ವತಿಯಿಂದ ನೀಡುವ “2025 ನೇ ಸಾಲಿನ ಉತ್ತಮ ಸಾಧಕ ಶಿಕ್ಷಕ ಪ್ರಶಸ್ತಿ” ಗೆ ಭಾಜನರಾಗಿರುವ ವಿದ್ವತ್ ಕಾಲೇಜಿನ ಕನ್ನಡ ಉಪನ್ಯಾಸಕ ನೀಲಕಂಠ ಅವರನ್ನು, ಅವರ ಈ ಸಾಧನೆಗಾಗಿ ಗೌರವಿಸಲಾಯಿತು.

“ವಿದ್ವತ್ ಶಿಕ್ಷಣ ಪ್ರತಿಷ್ಠಾನ” ದ ಕಾರ್ಯದರ್ಶಿ ಪ್ರಜ್ವಲ್ ರೈ, ಆಡಳಿತ ಅಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ . ಆರ್ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮ್ಯಕ್ ತೇಜಸ್ವಿ ಮತ್ತು ಚಂದನ ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!