July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾಯರ್ತಡ್ಕ: ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದ ಬೆಳ್ತಂಗಡಿ ತಾಲ್ಲೂಕು ಮಟ್ಟದ 17ರ ವಯೋಮಾನದೊಳಗಿನ ಮಕ್ಕಳ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಕಾಯರ್ತಡ್ಕ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಯಿತು.

ತಾಲ್ಲೂಕು ಮಟ್ಟದ ಬಾಲ್ – ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ತಾಲ್ಲೂಕು ಕ್ರೀಡಾ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ಇವರು ದೀಪ ಬೆಳಗಿಸಿ ಉದ್ಘಾಟನೆಗೈದು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ಇವರು ಕ್ರೀಡಾಸ್ಫೂರ್ತಿಯಿಂದ ಆಟವಾಡುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತುಗಳನ್ನು ಹೇಳಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಸ್ಪರ್ಧೆಯಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳ ತಂಡಗಳು ಪರಸ್ಪರ ಸೆನಸಾಡಿ ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಹಾಗೂ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಅಂತಿಮ ಸುತ್ತನ್ನು ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಎರಡೂ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಜಯಗಳಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ವಿಜೇತ ತಂಡಗಳಿಗೆ ಹಾಗೂ ರನ್ನರ್ಸ್ ಆಪ್ ತಂಡಗಳಿಗೆ ಟ್ರೋಫಿ, ಪದಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಯಿತು. ಪಂದ್ಯಾಕೂಟದ ಯಶಸ್ವಿಗೆ ಶಿಕ್ಷಕರು, ಶಾಲಾ ಆಡಳಿತ ಸಮಿತಿ ಸದಸ್ಯರು, ದಾನಿಗಳು ಸಹಕಾರ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತರಬೇತು ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಪ್ರಕಾಶ್ ಎ ಜೆ ಇವರನ್ನು ಪ್ರಶಂಶಿಲಾಯಿತು.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya
error: Content is protected !!