23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅವರು ವಿಮಾ ಪತ್ರ ಹಸ್ತಾಂತರಿಸಿ ಜಿಲ್ಲಾ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯಿಂದ ವಿಮಾ ಪ್ರೀಮಿ ಯಂನ್ನು ಭರಿಸಲಾಗುತ್ತದೆ. ರಿಲಯನ್ಸ್ ಸಂಸ್ಥೆಯ ಮೂಲಕ ವಿಮಾ ಹಣ ಪಾವತಿಯಾಗುತ್ತದೆ. ಬೆಳ್ತಂಗಡಿ, ಕಡಬ ಹಾಗೂ ಮೂಲ್ಕಿಯ ಪತ್ರಕರ್ತರ ಸಂಘದ ನಿವೇಶನದ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾತುಕತೆ ನಡೆಸಿರುವುದನ್ನು ವಿವರಿಸಿದರು. ಅಂಚೆ ಅಧಿಕಾರಿ ಸುಂದರ್ ಸಾಲಿಯಾನ್ ವಿಮಾ ನೋಂದಣಿ ಪ್ರಕ್ರಿಯೆ ನಡೆಸಿಕೊಟ್ಟರು.

ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ವಿಮಾ ಪ್ರಯೋಜನಗಳನ್ನು ತಿಳಿಸಿದರು. ತಾಲೂಕು ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ, ಕಾರ್ಯದರ್ಶಿ ತುಕಾರಾಮ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರು ಉಪಸ್ಥಿತರಿದ್ದರು.

Related posts

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!