25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

ಬೆಳ್ತಂಗಡಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಂಚೆ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತ ರಿಗೆ ಅಪಘಾತ ವಿಮೆ ಯೋಜನೆಯ ನೋಂದಣಿ ಕಾರ್ಯಕ್ರಮ ಸೆ.6ರಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅವರು ವಿಮಾ ಪತ್ರ ಹಸ್ತಾಂತರಿಸಿ ಜಿಲ್ಲಾ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯಿಂದ ವಿಮಾ ಪ್ರೀಮಿ ಯಂನ್ನು ಭರಿಸಲಾಗುತ್ತದೆ. ರಿಲಯನ್ಸ್ ಸಂಸ್ಥೆಯ ಮೂಲಕ ವಿಮಾ ಹಣ ಪಾವತಿಯಾಗುತ್ತದೆ. ಬೆಳ್ತಂಗಡಿ, ಕಡಬ ಹಾಗೂ ಮೂಲ್ಕಿಯ ಪತ್ರಕರ್ತರ ಸಂಘದ ನಿವೇಶನದ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಮಾತುಕತೆ ನಡೆಸಿರುವುದನ್ನು ವಿವರಿಸಿದರು. ಅಂಚೆ ಅಧಿಕಾರಿ ಸುಂದರ್ ಸಾಲಿಯಾನ್ ವಿಮಾ ನೋಂದಣಿ ಪ್ರಕ್ರಿಯೆ ನಡೆಸಿಕೊಟ್ಟರು.

ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ವಿಮಾ ಪ್ರಯೋಜನಗಳನ್ನು ತಿಳಿಸಿದರು. ತಾಲೂಕು ಸಂಘದ ಅಧ್ಯಕ್ಷ ಪ್ರಸಾದ್‌ ಶೆಟ್ಟಿ, ಕಾರ್ಯದರ್ಶಿ ತುಕಾರಾಮ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya
error: Content is protected !!