September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನದ ಜಾಗೃತಿ ಕಾರ್ಯಕ್ರಮ

ಉಜಿರೆ: ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದ ವತಿಯಿಂದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ವರ್ಷ ಸೆ.10ರಂದು ನಡೆಸಲ್ಪಡುವ ಈ ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವುದು ,ಜಾಗೃತಿ ಮೂಡಿಸುವುದು ಹಾಗೂ ಸಹಾನುಭೂತಿ ಬೆಳೆಸುವುದು ಆಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್‌ನ ಆಶ್ರಯದಲ್ಲಿ ವಿಶ್ವಾದ್ಯಂತ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಅಂತೆಯೇ ಕಾಲೇಜಿನ ವಿದ್ಯಾರ್ಥಿಗಳು ಈ ವಿಷಯದ ಕುರಿತಾದ ಮಾಹಿತಿಗಳನ್ನೊಳಗೊಂಡ ಭಿತ್ತಿಪತ್ರಗಳನ್ನು ರಚಿಸಿ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಜೀವನವು ಅಮೂಲ್ಯ ಹಾಗೂ ಕ್ಷುಲ್ಲಕ ಕಾರಣಗಳಿಗೆ ಜೀವನ ಅಂತ್ಯಗೊಳಿಸುವ ನಿರ್ಧಾರ ಸರಿಯಲ್ಲ . ಕಾಲೇಜಿನ ಆಪ್ತ ಸಮಾಲೋಚನಾ ವಿಭಾಗವನ್ನು ಸಂಪರ್ಕಿಸಿ ಸೂಕ್ತ ಮಾರ್ಗದರ್ಶನ ಪಡೆಯುವಂತೆ ಅರಿವು ಮೂಡಿಸುವ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರಾಸ್ತಾವಿಕ ಮಾಹಿತಿ ನೀಡಿದರು. ಮನೋವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ಯಾಮಿಲ ವಿದ್ಯಾರ್ಥಿಗಳಿಗೆ ಸಹಕರಿಸಿದರು. ಉಪನ್ಯಾಸಕರಾದ ದಿವ್ಯಾ ಕುಮಾರಿ ಹಾಗೂ ಡಾ. ಸಾಜಿದ ಉಪಸ್ಥಿತರಿದ್ದರು.

Related posts

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya
error: Content is protected !!