September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

ಬೆಳ್ತಂಗಡಿ: ಕಳೆದ ಕೆಲ ದಿನಗಳಿನಿಂದ ಬೆಳ್ತಂಗಡಿ ಪಟ್ಟಣದ ರಸ್ತೆಯಲ್ಲಿ ಧೂಳಿನ ಸಾಮ್ರಾಜ್ಯವೇ ತೆರೆದುಕೊಂಡಿದೆ. ಮಳೆಗಾಲದಲ್ಲಿ ಹೊಂಡಗಳನ್ನು ಮುಚ್ಚಲು ಹಾಕಿದ್ದ ಜಲ್ಲಿ ಹುಡಿ ಇಂದು ಸವಾರಿಗೆ ಧೂಳಿನ ಮಜ್ಜನ ಮಾಡುತ್ತಿದೆ.

ಸಣ್ಣ ವಾಹನ ಚಲಿಸಿದರೂ ಮೇಲೇಳುವ ಧೂಳಿನಿಂದ ಜನರು ರೋಸಿ ಹೋಗಿದ್ದಾರೆ. ತಾಲೂಕು ಕೇಂದ್ರವನ್ನು ಸಂಪರ್ಕಿಸುವ ಗುರುವಾಯನಕೆರೆ, ಸಂತೆಕಟ್ಟೆ, ಬೆಳ್ತಂಗಡಿ, ಲಾಯಿಲ, ಉಜಿರೆ ಸೇರಿದ್ದಂತೆ ನಾನಾ ರಸ್ತೆಗಳು ಧೂಳುಮಯಗೊಂಡಿದೆ.

ಒಂದೇಡೆ ಮಂಗಳೂರು-ವಿಲ್ಲಂಪುರಂ ರಾ.ಹೆ.ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಬಾರಿಯ ವೀಪರಿತ ಮಳೆಯಿಂದ ರಸ್ತೆಗಳಲ್ಲಿ ಹೊಂಡ ಸೃಷ್ಟಿಯಾಗಿತ್ತು. ಇದನ್ನು ಮುಚ್ಚುವ ಸಾಲುವಾಗಿ ತಾತ್ಕಲಿಕವಾಗಿ ಜಲ್ಲು ಹುಡಿಗಳನ್ನು ಹಾಕಿ ಗುಂಡಿ ಮುಚ್ಚುವ ಕಾರ್ಯ ನಡೆದಿತ್ತು. ಆದರೆ ಇದೀಗ ಕೆಲ ದಿನಗಳಿಂದ ಬಿಸಿಲಿನ ವಾತವರಣವಿದ್ದು ರಸ್ತೆಗಳಲ್ಲಿ ವಾಹನ ವೇಗವಾಗಿ ಸಂಚರಿಸುತ್ತಿದ್ದಂತೆಯೇ ಧೂಳು ಮೇಲೇಳುತ್ತಿದೆ. ಇದರಿಂದಾಗಿ ವಾಹನ ಸವಾರರಷ್ಟೆ? ಅಲ್ಲ ರಸ್ತೆಯ ಇಕ್ಕೆಲಗಳ ವರ್ತಕರು, ನಿವಾಸಿಗಳು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಸಮಸ್ಯೆ:
ರಸ್ತೆ ಬದಿಯ ವಾಣಿಜ್ಯ ಮಳಿಗೆಗಳ ವರ್ತಕರು ಧೂಳಿನಿಂದಾಗಿ ವಹಿವಾಟಿನಲ್ಲಿ ತೊಂದರೆಗೆ ಸಿಲುಕಿದ್ದರೆ, ರಸ್ತೆ ಬದಿಯ ಮನೆಯಲ್ಲಿ ವಾಸವಾಗಿರುವವರು ಧೂಳಿನಿಂದಾಗಿ ಬೇಸತ್ತು ದಿನವಿಡೀ ಮನೆಗಳ ಬಾಗಿಲು ಮುಚ್ಚಿಕೂಡುವಂತಾಗಿತ್ತು. ಅಷ್ಟೆ? ಅಲ್ಲ ರಸ್ತೆಯಲ್ಲಿ ಸಂಚರಿಸುವವರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ಮಾಸ್ಕ್ ಧರಿಸಿ ಹೋಗುವಂಥ ಸ್ಥಿತಿಯಿತ್ತು. ಅನೇಕರು ಧೂಳಿನಿಂದಾಗಿ ಆರೋಗ್ಯ ಹದಗೆಡುತ್ತಿದೆ ಎಂದಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಿ ರಸ್ತೆಗೆ ನೀರು ಹಾಕು ಕಾರ್ಯ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

-ಮನೀಷ್ ವಿ. ಅಂಚನ್ ಪಾಲೇದು

Related posts

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Suddi Udaya
error: Content is protected !!