22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

ಬೆಳ್ತಂಗಡಿ: ಕಳೆದ ಕೆಲ ದಿನಗಳಿನಿಂದ ಬೆಳ್ತಂಗಡಿ ಪಟ್ಟಣದ ರಸ್ತೆಯಲ್ಲಿ ಧೂಳಿನ ಸಾಮ್ರಾಜ್ಯವೇ ತೆರೆದುಕೊಂಡಿದೆ. ಮಳೆಗಾಲದಲ್ಲಿ ಹೊಂಡಗಳನ್ನು ಮುಚ್ಚಲು ಹಾಕಿದ್ದ ಜಲ್ಲಿ ಹುಡಿ ಇಂದು ಸವಾರಿಗೆ ಧೂಳಿನ ಮಜ್ಜನ ಮಾಡುತ್ತಿದೆ.

ಸಣ್ಣ ವಾಹನ ಚಲಿಸಿದರೂ ಮೇಲೇಳುವ ಧೂಳಿನಿಂದ ಜನರು ರೋಸಿ ಹೋಗಿದ್ದಾರೆ. ತಾಲೂಕು ಕೇಂದ್ರವನ್ನು ಸಂಪರ್ಕಿಸುವ ಗುರುವಾಯನಕೆರೆ, ಸಂತೆಕಟ್ಟೆ, ಬೆಳ್ತಂಗಡಿ, ಲಾಯಿಲ, ಉಜಿರೆ ಸೇರಿದ್ದಂತೆ ನಾನಾ ರಸ್ತೆಗಳು ಧೂಳುಮಯಗೊಂಡಿದೆ.

ಒಂದೇಡೆ ಮಂಗಳೂರು-ವಿಲ್ಲಂಪುರಂ ರಾ.ಹೆ.ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಬಾರಿಯ ವೀಪರಿತ ಮಳೆಯಿಂದ ರಸ್ತೆಗಳಲ್ಲಿ ಹೊಂಡ ಸೃಷ್ಟಿಯಾಗಿತ್ತು. ಇದನ್ನು ಮುಚ್ಚುವ ಸಾಲುವಾಗಿ ತಾತ್ಕಲಿಕವಾಗಿ ಜಲ್ಲು ಹುಡಿಗಳನ್ನು ಹಾಕಿ ಗುಂಡಿ ಮುಚ್ಚುವ ಕಾರ್ಯ ನಡೆದಿತ್ತು. ಆದರೆ ಇದೀಗ ಕೆಲ ದಿನಗಳಿಂದ ಬಿಸಿಲಿನ ವಾತವರಣವಿದ್ದು ರಸ್ತೆಗಳಲ್ಲಿ ವಾಹನ ವೇಗವಾಗಿ ಸಂಚರಿಸುತ್ತಿದ್ದಂತೆಯೇ ಧೂಳು ಮೇಲೇಳುತ್ತಿದೆ. ಇದರಿಂದಾಗಿ ವಾಹನ ಸವಾರರಷ್ಟೆ? ಅಲ್ಲ ರಸ್ತೆಯ ಇಕ್ಕೆಲಗಳ ವರ್ತಕರು, ನಿವಾಸಿಗಳು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಸಮಸ್ಯೆ:
ರಸ್ತೆ ಬದಿಯ ವಾಣಿಜ್ಯ ಮಳಿಗೆಗಳ ವರ್ತಕರು ಧೂಳಿನಿಂದಾಗಿ ವಹಿವಾಟಿನಲ್ಲಿ ತೊಂದರೆಗೆ ಸಿಲುಕಿದ್ದರೆ, ರಸ್ತೆ ಬದಿಯ ಮನೆಯಲ್ಲಿ ವಾಸವಾಗಿರುವವರು ಧೂಳಿನಿಂದಾಗಿ ಬೇಸತ್ತು ದಿನವಿಡೀ ಮನೆಗಳ ಬಾಗಿಲು ಮುಚ್ಚಿಕೂಡುವಂತಾಗಿತ್ತು. ಅಷ್ಟೆ? ಅಲ್ಲ ರಸ್ತೆಯಲ್ಲಿ ಸಂಚರಿಸುವವರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು, ಮಾಸ್ಕ್ ಧರಿಸಿ ಹೋಗುವಂಥ ಸ್ಥಿತಿಯಿತ್ತು. ಅನೇಕರು ಧೂಳಿನಿಂದಾಗಿ ಆರೋಗ್ಯ ಹದಗೆಡುತ್ತಿದೆ ಎಂದಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಿ ರಸ್ತೆಗೆ ನೀರು ಹಾಕು ಕಾರ್ಯ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

-ಮನೀಷ್ ವಿ. ಅಂಚನ್ ಪಾಲೇದು

Related posts

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya
error: Content is protected !!