September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನದ ಜಾಗೃತಿ ಕಾರ್ಯಕ್ರಮ

ಉಜಿರೆ: ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದ ವತಿಯಿಂದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ವರ್ಷ ಸೆ.10ರಂದು ನಡೆಸಲ್ಪಡುವ ಈ ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವುದು ,ಜಾಗೃತಿ ಮೂಡಿಸುವುದು ಹಾಗೂ ಸಹಾನುಭೂತಿ ಬೆಳೆಸುವುದು ಆಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್‌ನ ಆಶ್ರಯದಲ್ಲಿ ವಿಶ್ವಾದ್ಯಂತ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಅಂತೆಯೇ ಕಾಲೇಜಿನ ವಿದ್ಯಾರ್ಥಿಗಳು ಈ ವಿಷಯದ ಕುರಿತಾದ ಮಾಹಿತಿಗಳನ್ನೊಳಗೊಂಡ ಭಿತ್ತಿಪತ್ರಗಳನ್ನು ರಚಿಸಿ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಜೀವನವು ಅಮೂಲ್ಯ ಹಾಗೂ ಕ್ಷುಲ್ಲಕ ಕಾರಣಗಳಿಗೆ ಜೀವನ ಅಂತ್ಯಗೊಳಿಸುವ ನಿರ್ಧಾರ ಸರಿಯಲ್ಲ . ಕಾಲೇಜಿನ ಆಪ್ತ ಸಮಾಲೋಚನಾ ವಿಭಾಗವನ್ನು ಸಂಪರ್ಕಿಸಿ ಸೂಕ್ತ ಮಾರ್ಗದರ್ಶನ ಪಡೆಯುವಂತೆ ಅರಿವು ಮೂಡಿಸುವ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರಾಸ್ತಾವಿಕ ಮಾಹಿತಿ ನೀಡಿದರು. ಮನೋವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ಯಾಮಿಲ ವಿದ್ಯಾರ್ಥಿಗಳಿಗೆ ಸಹಕರಿಸಿದರು. ಉಪನ್ಯಾಸಕರಾದ ದಿವ್ಯಾ ಕುಮಾರಿ ಹಾಗೂ ಡಾ. ಸಾಜಿದ ಉಪಸ್ಥಿತರಿದ್ದರು.

Related posts

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya
error: Content is protected !!