23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಮನೋಜ್ ಶಾಂತಿ ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ , ನಿರ್ದೇಶಕರುಗಳಾದ ರಮಾನಾಥ್ ಸನಿಲ್, ದಿವಾಕರ್ ಬಿಪಿ, ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ವಾಮನ್ ಕೆ ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

Related posts

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya
error: Content is protected !!