July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 11 ರಂದು ಸಂಘದ ಸಂಗಮ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 34.21 ಕೋಟಿ ಠೇವಣಿ ಹೊಂದಿದ್ದು, ರೂ. 42.82ಕೋಟಿ ಸಾಲ ಹೊರಬಾಕಿ ಇದ್ದು ವರ್ಷಾಂತ್ಯಕ್ಕೆ ಶೇ. 99%ರಷ್ಟು ವಸೂಲಾತಿ ಆಗಿರುತ್ತದೆ. ವಾರ್ಷಿಕ ರೂ. 233.13 ಕೋಟಿ ವ್ಯವಹಾರ ನಡೆಸಿ ಗರಿಷ್ಠ ರೂ. 1,20,34,914.68 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ರಷ್ಟು ಡಿವಿಡೆಂಟ್ ನೀಡಿದೆ.

ಈ ವೆಳೆ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ , ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಗಿಂತ ಹೆಚ್ಚಿನ ಅಂಕ ಗಳಿಸಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು . ಅತೀ ಹೆಚ್ಚು ಗೊಬ್ಬರ ಖರೀದಿ ಮಾಡಿದ ಹಾಗೂ ಅತೀ ಹೆಚ್ಚು ಅಡಿಕೆ ಮಾರಾಟ ಮಾಡಿದ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲ, ನಿರ್ದೇಶಕರಾದ ವಿಠಲ ಭಂಡಾರಿ, ಉದಯ ಕುಮಾರ್, ಶ್ರೀನಾಥ್ ಬಿ., ಪದ್ಮನಾಭ್ ಗೌಡ ಕೆ., ಅಶ್ವಿನಿ ರವಿ ನಾಯ್ಕ್, ಪ್ರೇಮಾವತಿ, ಸುನಿಲ್ ಕೆ.,ರವಿಚಂದ್ರ ಪಿ, ವಿಶ್ವನಾಥ್ ಕಕ್ಕುದೋಳಿ, ಮುತ್ತಪ್ಪ, ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಹಾಗೂ ಸದಸ್ಯರು , ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಕೆ. ವಾರ್ಷಿಕ ವರದಿ ವಾಚಿಸಿ, ಗುಮಾಸ್ತ ಸುಂದರ ಗೌಡ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya
error: Content is protected !!