30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 11 ರಂದು ಸಂಘದ ಸಂಗಮ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 34.21 ಕೋಟಿ ಠೇವಣಿ ಹೊಂದಿದ್ದು, ರೂ. 42.82ಕೋಟಿ ಸಾಲ ಹೊರಬಾಕಿ ಇದ್ದು ವರ್ಷಾಂತ್ಯಕ್ಕೆ ಶೇ. 99%ರಷ್ಟು ವಸೂಲಾತಿ ಆಗಿರುತ್ತದೆ. ವಾರ್ಷಿಕ ರೂ. 233.13 ಕೋಟಿ ವ್ಯವಹಾರ ನಡೆಸಿ ಗರಿಷ್ಠ ರೂ. 1,20,34,914.68 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ರಷ್ಟು ಡಿವಿಡೆಂಟ್ ನೀಡಿದೆ.

ಈ ವೆಳೆ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ , ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಗಿಂತ ಹೆಚ್ಚಿನ ಅಂಕ ಗಳಿಸಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು . ಅತೀ ಹೆಚ್ಚು ಗೊಬ್ಬರ ಖರೀದಿ ಮಾಡಿದ ಹಾಗೂ ಅತೀ ಹೆಚ್ಚು ಅಡಿಕೆ ಮಾರಾಟ ಮಾಡಿದ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲ, ನಿರ್ದೇಶಕರಾದ ವಿಠಲ ಭಂಡಾರಿ, ಉದಯ ಕುಮಾರ್, ಶ್ರೀನಾಥ್ ಬಿ., ಪದ್ಮನಾಭ್ ಗೌಡ ಕೆ., ಅಶ್ವಿನಿ ರವಿ ನಾಯ್ಕ್, ಪ್ರೇಮಾವತಿ, ಸುನಿಲ್ ಕೆ.,ರವಿಚಂದ್ರ ಪಿ, ವಿಶ್ವನಾಥ್ ಕಕ್ಕುದೋಳಿ, ಮುತ್ತಪ್ಪ, ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಹಾಗೂ ಸದಸ್ಯರು , ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಕೆ. ವಾರ್ಷಿಕ ವರದಿ ವಾಚಿಸಿ, ಗುಮಾಸ್ತ ಸುಂದರ ಗೌಡ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!