30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಪೂಜ್ಯ ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.ಪೂಜ್ಯ ಪೇಜಾವರ ಸ್ವಾಮೀಜಿಯವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊAದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು.

ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು.ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿಯವರು ಪ್ರಸಾದ ನೀಡಿ ಆಶೀರ್ವದಿಸಿದರು. ಬಳಿಕ ಸ್ವಾಮೀಜಿ ದೇವರದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Related posts

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!