25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!