25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಮಜ್ದೂರು ಸಂಘವು ಸದಾ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಬೃಹತ್ ರಾಷ್ಟ್ರೀಯ ಸಂಘಟನೆ. ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳನ್ನು, ಜಿಲ್ಲಾ ಘಟಕವು ತಕ್ಷಣ ಅನುಷ್ಠಾನಗೊಳಿಸಿ ಜಿಲ್ಲೆಯ ಎಲ್ಲಾ ಯೂನಿಯನ್ ಮತ್ತು ತಾಲೂಕು ಮಟ್ಟದ ಪ್ರಮುಖರಿಗೆ ತಲುಪಿಸುವ ಮಹತ್ತರ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಿದೆ.


ಆಗಸ್ಟ್ 14 ರಿಂದ ಸೆಪ್ಟೆಂಬರ್ 6 ರವರೆಗೆ ಸುಳ್ಯ, ಪುತ್ತೂರು, ಬಂಟ್ವಾಳ, ಕಡಬ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಮಂಗಳೂರು ತಾಲೂಕುಗಳಲ್ಲಿ ಸಮನ್ವಯ ಸಭೆಗಳು ಯಶಸ್ವಿಯಾಗಿ ನಡೆದವು.
ಈ ಸಭೆಗಳಲ್ಲಿ ನೂರಾರು ಕಾರ್ಮಿಕ ಪ್ರತಿನಿಧಿಗಳು ಭಾಗವಹಿಸಿ ರಾಜ್ಯ ಮಟ್ಟದ ನಿರ್ಧಾರಗಳನ್ನು ಚರ್ಚಿಸಿ, ತಮ್ಮ ಸ್ಥಳೀಯ ಸಮಸ್ಯೆಗಳನ್ನೂ ಹಂಚಿಕೊಂಡರು.


ಪ್ರತಿ ಸಭೆಯಲ್ಲಿ ಕಾರ್ಯಕರ್ತರಿಗೆ ಸಂಘಟನೆಯ ಸಿದ್ಧಾಂತ, ಹೋರಾಟದ ಇತಿಹಾಸ ಹಾಗೂ ಮುಂದಿನ ಹಾದಿಯ ಬಗ್ಗೆ ಪ್ರೇರಣಾದಾಯಕ ಚರ್ಚೆಗಳು ನಡೆಯಿತು. ಕಾರ್ಮಿಕರ ಏಕತೆ, ಶಕ್ತಿ, ಸ್ವಾಭಿಮಾನ ಇವುಗಳೇ ಸಮಾಜ ಪರಿವರ್ತನೆಗೆ ದಾರಿ ಎಂದು ಒತ್ತಿಹೇಳಲಾಯಿತು.


ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿಗಳಾದ ವಸಂತ್ ಕುಮಾರ್ ಮನಿಹಳ್ಳ ಮತ್ತು ಕುಮಾರ್ ನಾಥ್ ಉಜಿರೆ ಅವರ ನೇತೃತ್ವದಲ್ಲಿ ಹಾಗೂ ರಾಜ್ಯ ಪದಾಧಿಕಾರಿಗಳಾದ ಸತೀಶ್ ಶೆಟ್ಟಿ ಮತ್ತು ಜಯರಾಜ್ ಸಾಲ್ಯಾನ್ ಇವರ ಮಾರ್ಗದರ್ಶನದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಶಿಸ್ತಿನಿಂದ ಮತ್ತು ಶ್ರದ್ಧೆಯಿಂದ ನೆರವೇರಿಸಲ್ಪಟ್ಟವು.

Related posts

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
error: Content is protected !!