30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಡಂತ್ಯಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 11ರಂದು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷೆ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ ರಾಜ್ ಮಡಂತ್ಯಾರು ಪಶು ಚಿಕಿತ್ಸಾಲಯದ ಹಿರಿಯ ವೈದ್ಯ ವಿನಯ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕುಕ್ಕಳ, ಸದಸ್ಯರಾದ ಸಂಗೀತಾ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ವಿಶ್ವನಾಥ್ ಪೂಜಾರಿ, ಅಗ್ನೇಸ್ ಮೋನಿಸ್, ಮೋಹಿನಿ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಸಾರ ಸನಫ್ ಯು.ವೈ, ಪಾರ್ವತಿ, ಶಶಿಪ್ರಭಾ, ರಾಜೀವ ಹಾಗೂ ಶೀಲಾವತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸದಸ್ಯ ಶೈಲೇಶ್ ಪಿ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ವರದಿ ವಾಚಿಸಿದರು.

Related posts

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya
error: Content is protected !!