September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

ವೇಣೂರು: ಹಿಂದೂ ಎನ್ನುವುದು ಜಾತಿಯಲ್ಲ, ಅದೊಂದು ಆದರ್ಶ ವ್ಯಕ್ತಿತ್ವ. ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕನಾಗುವವನೇ ಹಿಂದೂ. ಹಿಂದೂ ಧರ್ಮವು ವ್ಯಕ್ತಿಯನ್ನು ದೈವಿಕ ಶಕ್ತಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುವ ಹಲವು ಆಚರಣೆಗಳನ್ನು ಒಳಗೊಂಡಿದೆ. ಉದಾಹರಣೆಗೆ, ಬೆಳಿಗ್ಗೆ ಕರ ದರ್ಶನ ಮಾಡುವುದು, ಊಟಕ್ಕೆ ಮೊದಲು ಅನ್ನಪೂರ್ಣ ದೇವಿಗೆ ಪ್ರಾರ್ಥಿಸುವುದು, ಮತ್ತು ಸಂಜೆ ತುಳಸಿ ಮಾತೆಗೆ ದೀಪ ಹಚ್ಚುವುದು.

ಧರ್ಮ ಶಿಕ್ಷಣದ ಕೊರತೆಯಿಂದಾಗಿ ಹಿಂದೂ ಸಮಾಜ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಂಧಾನುಕರಣೆ ಮಾಡುತ್ತಿದ್ದು, ಇದು ಯುವ ಪೀಳಿಗೆಯನ್ನು ದಾರಿತಪ್ಪಿಸುತ್ತಿದೆ.
ಮನುಷ್ಯ ಜನ್ಮದ ಅಂತಿಮ ಗುರಿ ಈಶ್ವರ ಪ್ರಾಪ್ತಿ. ಹಿಂದೂ ಧರ್ಮದ ನಾಲ್ಕು ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮತ್ತು ಮೋಕ್ಷಗಳಲ್ಲಿ, ಧರ್ಮ ಶಿಕ್ಷಣದ ಕೊರತೆಯಿಂದಾಗಿ ಧರ್ಮ ಮತ್ತು ಮೋಕ್ಷ ಕಣ್ಮರೆಯಾಗುತ್ತಿವೆ. ಇದರಿಂದ ಜನರು ಈಶ್ವರ ಪ್ರಾಪ್ತಿಯ ಗುರಿಯಿಂದ ದೂರವಾಗುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ತಿಳಿಸಿದರು.

ವೇಣೂರಿನ ಗೋಳಿಯಂಗಡಿಯ ದೇವಾಡಿಗರ ಸಮುದಾಯ ಭವನದಲ್ಲಿ ಸ್ಥಳೀಯ ಧರ್ಮಪ್ರೇಮಿಗಳ ಸಹಭಾಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ವೇಣೂರಿನ ಹರೀಶ ಶೆಟ್ಟಿ, ಸೋಮನಾಥ , ಸಂದೀಪ, ಸೀತಾರಾಮ ಆಚಾರ್ಯ, ಲಕ್ಷ್ಮಣ ಮುಂತಾದ 400ಕ್ಕೂ ಅಧಿಕ ಹಿಂದುತ್ವನಿಷ್ಠರು ಭಾಗಿಯಾಗಿದ್ದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya
error: Content is protected !!