July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ ನಡೆದಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಮಲ್ಲಿಕಾ ಕೆ ಹೆಗ್ಡೆ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್ ಡಿ ಎಂ ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಾಸ್ಕರ್ ಪೈ ,ಸಿ ಎ ಬ್ಯಾಂಕ್ ವೇಣೂರು ಇಲ್ಲಿನ ಅಧ್ಯಕ್ಷ ಸುಂದರ್ ಹೆಗ್ಡೆ ,ರೋಟರಿ ಕ್ಲಬ್ ಸಿದ್ದಕಟ್ಟೆ ಅಧ್ಯಕ್ಷ ರೊ .ದುರ್ಗಾದಾಸ್ ಶೆಟ್ಟಿ, ಲಯನ್ಸ್ ಕ್ಲಬ್ ವೇಣೂರು ಇದರ ಅಧ್ಯಕ್ಷ ಲ. ಸುದೀರ್ ಭಂಡಾರಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಾ ಕೇಸರಿ, ಗಣೇಶ್ ನಾರಾಯಣ ಪಂಡಿತ್ ಮೂಡುಕೋಡಿ , ಮೋಹನ್ ದಾಸ್ ಹೆಗ್ಡೆ ವೇಣೂರು ಸುಜಯ ದೈ.ಶಿ.ಶಿ ಪರಿವೀಕ್ಷಕರು ಗಂಗಾಧರ್ ಪ್ರಾಂಶುಪಾಲರು ಶಿವಶಂಕರ್ ಭಟ್ ನಿವೃತ್ತ ಮುಖ್ಯೋಪಾಧ್ಯಾಯರು ಅಂಡಿಂಜೆ ಉಪಸ್ಥಿತರಿದ್ದರು .

ಖೋ ಖೋ ಅಂಕಣದ ಉದ್ಘಾಟನೆಯನ್ನು ಭಾಸ್ಕರ್ ಪೈ ನೆರವೇರಿಸಿಕೊಟ್ಟರು. ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರು ಸ್ವಾಗತಿಸಿ, ಕನ್ನಡ ಅಧ್ಯಾಪಕ ರವೀಂದ್ರ ಕೆ ವಂದಿಸಿದರು. ಸುಶೀಲ ಜಿ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಹುಡುಗಿಯರ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅಳದಂಗಡಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya
error: Content is protected !!