25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!