Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಸಾಧನೆಯ ಸಂಭ್ರಮದಲ್ಲಿ ಸೈಂಟ್ ಮೇರಿಸ್ ಶಾಲೆ: ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಅದ್ಧೂರಿ ಅಭಿನಂದನೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!