ಆರಂಬೋಡಿ : ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಆರಂಬೋಡಿ ಇದರ ವಾರ್ಷಿಕ ಮಹಾಸಭೆಯು ಸೆ.09 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.
ಮಹಾ ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಆಶಾ. ಎಸ್. ಶೆಟ್ಟಿ ವಹಿಸಿದ್ದರು. ಕಾರ್ಯದರ್ಶಿ ಧನವತಿ ಪ್ರಾರ್ಥಿಸಿ, ಸ್ವಾಗತಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಮ್.ಬಿ.ಕೆ ಸುಮತಿ 2ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ , ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ , ಫಾರ್ಮ್ ಮೆನೇಜರ್ ಬಂಗಾರಪ್ಪ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಬಗ್ಗೆ, ಅದರ ದ್ಯೇಯೋದ್ದೇಶದ ಬಗ್ಗೆ, ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಇತರ ಹಲವಾರು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.
ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಪೋಷಣ ಅಭಿಯಾನದ ಬಗ್ಗೆ ಸಿಸ್ಟರ್ ಕುಸುಮಾವತಿ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಎಲ್.ಸಿ.ಆರ್.ಪಿ ಶಾರದಾ ನಿರೂಪಿಸಿ, ಪಶುಸಖಿ ಸುಭಾಷಿನಿ ಧನ್ಯವಾದವಿತ್ತರು.











