27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

ಉಜಿರೆ : ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪೂಜ್ಯ ಡಾ. ಡಿ . ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ಕೌಶಲ್ಯ ಒದಗಿಸುವ ಉದ್ದೇಶದಿಂದ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಜಿನೀಯರ್ಸ್ ಡೇ ಪ್ರಯುಕ್ತ ಸಿವಿಲ್ ಇಂಜಿನಿಯರಿಂಗ್ ವಿಭಾಗದಿಂದ “ಮಿನಿಬ್ರಿಡ್ಜ್ ಮಾಸ್ಟರ್ ” ಎಂಬ ತಾಂತ್ರಿಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯು ವಿದ್ಯಾರ್ಥಿಗಳಿಗೆ ಮಾದರಿ ಸೇತುವೆಗಳನ್ನು ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ಪರೀಕ್ಷಿಸಲು ಒಂದು ವೇದಿಕೆಯನ್ನು ಒದಗಿಸಿಕೊಟ್ಟಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ವಿದ್ಯಾಕುಮಾರ್, ಇಂಜಿನಿಯರ್ ಐ ಕೇರ್ ಬಿಲ್ಡರ್ಸ್ ಮತ್ತು ಡೆವೆಲಪರ್ಸ್ ಉಜಿರೆ ದೀಪ ಪ್ರಜ್ವಲನೆ ಮಾಡಿ, ರಚನಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕಾರ್ಯಕ್ರಮ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ತೃಪ್ತಿ ಶೆಟ್ಟಿ, ಕಾರ್ಯಕ್ರಮದ ಸಂಯೋಜಕ ಅಶ್ವಿನ್ ಮರಾಠೆ ಉಪಸ್ಥಿತರಿದ್ದರು.

ಎ ಸಿ ಸಿ ಇ ಐ ಬೆಳ್ತಂಗಡಿಯ ಪ್ರಮೋದ್ ಮತ್ತು ಚೇತನ್ ಉಪಸ್ಥಿತರಿದ್ದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಈಶ್ವರ್ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
error: Content is protected !!