ಕಣಿಯೂರು ಗ್ರಾಮ ಪಂಚಾಯತಿನ ೨೦೨೪-೨೫ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ೧೫ನೇ ಹಣಕಾಸು ಆಯೋಗದ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳನ್ನು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವತಿಯಿಂದ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆಯನ್ನು ಹಿರಿಯ ಪಶು ವೈದ್ಯಾಧಿಕಾರಿ ಡಾ| ವಿನಯ ಪಶು ಚಿಕಿತ್ಸಾಲಯ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ ಸಾಲ್ಯಾನ್ ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ, ಕಣಿಯೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸೀತಾರಾಮ ಮಡಿವಾಳ, ಉಪಾಧ್ಯಕ್ಷೆ ಶ್ರೀಮತಿ ಜಾನಕಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಬೆಂಗೈ, ಶ್ರೀಮತಿ ಗಾಯತ್ರಿ, ಕುಮಾರಿ ಮೋಹಿನಿ, ಶ್ರೀಮತಿ ಜಲಜಾಕ್ಷಿ ಹಾಗೂ ಉಮಾವತಿ, ತಾಂತ್ರಿಕ ಸಂಯೋಜಕರಾದ ಶರಣ್ ರೈ, ಹಾಗೂ ಲೀಸಾ ಡೇಸ ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಸಾಮಾಜಿಕ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಂಥಪಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಧನ್ಯವಾದವಿತ್ತರು.











