September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

ಕಣಿಯೂರು ಗ್ರಾಮ ಪಂಚಾಯತಿನ ೨೦೨೪-೨೫ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ೧೫ನೇ ಹಣಕಾಸು ಆಯೋಗದ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳನ್ನು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವತಿಯಿಂದ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆಯನ್ನು ಹಿರಿಯ ಪಶು ವೈದ್ಯಾಧಿಕಾರಿ ಡಾ| ವಿನಯ ಪಶು ಚಿಕಿತ್ಸಾಲಯ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ ಸಾಲ್ಯಾನ್ ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ, ಕಣಿಯೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸೀತಾರಾಮ ಮಡಿವಾಳ, ಉಪಾಧ್ಯಕ್ಷೆ ಶ್ರೀಮತಿ ಜಾನಕಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಬೆಂಗೈ, ಶ್ರೀಮತಿ ಗಾಯತ್ರಿ, ಕುಮಾರಿ ಮೋಹಿನಿ, ಶ್ರೀಮತಿ ಜಲಜಾಕ್ಷಿ ಹಾಗೂ ಉಮಾವತಿ, ತಾಂತ್ರಿಕ ಸಂಯೋಜಕರಾದ ಶರಣ್ ರೈ, ಹಾಗೂ ಲೀಸಾ ಡೇಸ ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಸಾಮಾಜಿಕ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಂಥಪಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಧನ್ಯವಾದವಿತ್ತರು.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya
error: Content is protected !!