ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದು ಶೈಲೇಶ್, ಮನ್ವಿತ್, ಸಾತ್ವಿಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಶ್ರವಂತ್ ಬೆಸ್ಟ್ ಚೇಸರ್ ಆಗಿ, ಭವಿಷ್ಯ ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾರೆ. ವಿಜೇತ ತಂಡಕ್ಕೆ ಶಾಲಾ ಮುಖ್ಯ ಶಿಕ್ಷಕರಾದ ಶಾಂತಿ ಮರಿಯ ಸಲ್ದಾನ, ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರ ಎನ್, ಶಾಲಾ ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷರಾದ ಸದಾಶಿವ ಪೂಜಾರಿ, ಸದಸ್ಯರಾದ ಸುರೇಶ್, ಶೇಖರ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ನಾಯಕ ಮನೋಹರ್, ಹಳೆ ವಿದ್ಯಾರ್ಥಿ ಅಭಿಷೇಕ್ ಅಭಿನಂದನೆಗಳನ್ನು ಸಲ್ಲಿಸಿದರು.











