22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya
error: Content is protected !!