23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya
error: Content is protected !!