ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya
error: Content is protected !!