22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಮಜ್ದೂರು ಸಂಘವು ಸದಾ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಬೃಹತ್ ರಾಷ್ಟ್ರೀಯ ಸಂಘಟನೆ. ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳನ್ನು, ಜಿಲ್ಲಾ ಘಟಕವು ತಕ್ಷಣ ಅನುಷ್ಠಾನಗೊಳಿಸಿ ಜಿಲ್ಲೆಯ ಎಲ್ಲಾ ಯೂನಿಯನ್ ಮತ್ತು ತಾಲೂಕು ಮಟ್ಟದ ಪ್ರಮುಖರಿಗೆ ತಲುಪಿಸುವ ಮಹತ್ತರ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಿದೆ.


ಆಗಸ್ಟ್ 14 ರಿಂದ ಸೆಪ್ಟೆಂಬರ್ 6 ರವರೆಗೆ ಸುಳ್ಯ, ಪುತ್ತೂರು, ಬಂಟ್ವಾಳ, ಕಡಬ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಮಂಗಳೂರು ತಾಲೂಕುಗಳಲ್ಲಿ ಸಮನ್ವಯ ಸಭೆಗಳು ಯಶಸ್ವಿಯಾಗಿ ನಡೆದವು.
ಈ ಸಭೆಗಳಲ್ಲಿ ನೂರಾರು ಕಾರ್ಮಿಕ ಪ್ರತಿನಿಧಿಗಳು ಭಾಗವಹಿಸಿ ರಾಜ್ಯ ಮಟ್ಟದ ನಿರ್ಧಾರಗಳನ್ನು ಚರ್ಚಿಸಿ, ತಮ್ಮ ಸ್ಥಳೀಯ ಸಮಸ್ಯೆಗಳನ್ನೂ ಹಂಚಿಕೊಂಡರು.


ಪ್ರತಿ ಸಭೆಯಲ್ಲಿ ಕಾರ್ಯಕರ್ತರಿಗೆ ಸಂಘಟನೆಯ ಸಿದ್ಧಾಂತ, ಹೋರಾಟದ ಇತಿಹಾಸ ಹಾಗೂ ಮುಂದಿನ ಹಾದಿಯ ಬಗ್ಗೆ ಪ್ರೇರಣಾದಾಯಕ ಚರ್ಚೆಗಳು ನಡೆಯಿತು. ಕಾರ್ಮಿಕರ ಏಕತೆ, ಶಕ್ತಿ, ಸ್ವಾಭಿಮಾನ ಇವುಗಳೇ ಸಮಾಜ ಪರಿವರ್ತನೆಗೆ ದಾರಿ ಎಂದು ಒತ್ತಿಹೇಳಲಾಯಿತು.


ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿಗಳಾದ ವಸಂತ್ ಕುಮಾರ್ ಮನಿಹಳ್ಳ ಮತ್ತು ಕುಮಾರ್ ನಾಥ್ ಉಜಿರೆ ಅವರ ನೇತೃತ್ವದಲ್ಲಿ ಹಾಗೂ ರಾಜ್ಯ ಪದಾಧಿಕಾರಿಗಳಾದ ಸತೀಶ್ ಶೆಟ್ಟಿ ಮತ್ತು ಜಯರಾಜ್ ಸಾಲ್ಯಾನ್ ಇವರ ಮಾರ್ಗದರ್ಶನದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಶಿಸ್ತಿನಿಂದ ಮತ್ತು ಶ್ರದ್ಧೆಯಿಂದ ನೆರವೇರಿಸಲ್ಪಟ್ಟವು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!