37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

ವೇಣೂರು: ಹಿಂದೂ ಎನ್ನುವುದು ಜಾತಿಯಲ್ಲ, ಅದೊಂದು ಆದರ್ಶ ವ್ಯಕ್ತಿತ್ವ. ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕನಾಗುವವನೇ ಹಿಂದೂ. ಹಿಂದೂ ಧರ್ಮವು ವ್ಯಕ್ತಿಯನ್ನು ದೈವಿಕ ಶಕ್ತಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುವ ಹಲವು ಆಚರಣೆಗಳನ್ನು ಒಳಗೊಂಡಿದೆ. ಉದಾಹರಣೆಗೆ, ಬೆಳಿಗ್ಗೆ ಕರ ದರ್ಶನ ಮಾಡುವುದು, ಊಟಕ್ಕೆ ಮೊದಲು ಅನ್ನಪೂರ್ಣ ದೇವಿಗೆ ಪ್ರಾರ್ಥಿಸುವುದು, ಮತ್ತು ಸಂಜೆ ತುಳಸಿ ಮಾತೆಗೆ ದೀಪ ಹಚ್ಚುವುದು.

ಧರ್ಮ ಶಿಕ್ಷಣದ ಕೊರತೆಯಿಂದಾಗಿ ಹಿಂದೂ ಸಮಾಜ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಂಧಾನುಕರಣೆ ಮಾಡುತ್ತಿದ್ದು, ಇದು ಯುವ ಪೀಳಿಗೆಯನ್ನು ದಾರಿತಪ್ಪಿಸುತ್ತಿದೆ.
ಮನುಷ್ಯ ಜನ್ಮದ ಅಂತಿಮ ಗುರಿ ಈಶ್ವರ ಪ್ರಾಪ್ತಿ. ಹಿಂದೂ ಧರ್ಮದ ನಾಲ್ಕು ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮತ್ತು ಮೋಕ್ಷಗಳಲ್ಲಿ, ಧರ್ಮ ಶಿಕ್ಷಣದ ಕೊರತೆಯಿಂದಾಗಿ ಧರ್ಮ ಮತ್ತು ಮೋಕ್ಷ ಕಣ್ಮರೆಯಾಗುತ್ತಿವೆ. ಇದರಿಂದ ಜನರು ಈಶ್ವರ ಪ್ರಾಪ್ತಿಯ ಗುರಿಯಿಂದ ದೂರವಾಗುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ತಿಳಿಸಿದರು.

ವೇಣೂರಿನ ಗೋಳಿಯಂಗಡಿಯ ದೇವಾಡಿಗರ ಸಮುದಾಯ ಭವನದಲ್ಲಿ ಸ್ಥಳೀಯ ಧರ್ಮಪ್ರೇಮಿಗಳ ಸಹಭಾಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ವೇಣೂರಿನ ಹರೀಶ ಶೆಟ್ಟಿ, ಸೋಮನಾಥ , ಸಂದೀಪ, ಸೀತಾರಾಮ ಆಚಾರ್ಯ, ಲಕ್ಷ್ಮಣ ಮುಂತಾದ 400ಕ್ಕೂ ಅಧಿಕ ಹಿಂದುತ್ವನಿಷ್ಠರು ಭಾಗಿಯಾಗಿದ್ದರು.

Related posts

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!