26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya
error: Content is protected !!