23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!