25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

ಬೆಳ್ತಂಗಡಿ: ಸೆಪ್ಟೆಂಬರ್ 13ರಂದು ಜೈನ ಧರ್ಮೀಯರ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರವಣಬೆಳಗೊಳದ ಜಗದ್ಗುರು ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟಾಚಾರ್ಯವರ್ಯ ಮಹಾಸ್ವಾಮಿಗಳು ,ಶ್ರೀ ಜೈನಮಠ, ಶ್ರವಣಬೆಳಗೊಳ ಇವರು ಬೆಳ್ತಂಗಡಿಯ ಇತಿಹಾಸ ಪ್ರಸಿದ್ಧವಾದ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಇಲ್ಲಿಗೆ ಬೆಳಗ್ಗೆ 9ಗೆ ಪುರ ಪ್ರವೇಶ ಮಾಡಲಿದ್ದಾರೆ. ಇವರನ್ನು ಸಮಾಜ ಬಾಂಧವರು ಭವ್ಯತೆಯಿಂದ ಸ್ವಾಗತಿಸಲಿದ್ದಾರೆ.

ಸದ್ರಿ ದಿನದಂದು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯಲ್ಲಿ ನಡೆಯಲಿರುವ ಚಂದನ ಷಷ್ಟಿಯ ಉದ್ಯಾಪನೆಯಲ್ಲಿ ದಿವ್ಯ ಪಾವನ ಸಾನಿಧ್ಯ ವಹಿಸಿಕೊಂಡು ಮಾರ್ಗದರ್ಶನ ನೀಡಲಿರುವರು. ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕರಾದ ಕೆ ಜಯರಾಜ್ ಇಂದ್ರರವರ ತಂಡದವರು ಪೂಜಾ ವಿಧಿ ವಿಧಾನ ನಡೆಸಿಕೊಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ ವಿಶ್ವಶಾಂತಿ, ವಿಶ್ವದೆಲ್ಲೆಡೆ ನೆಮ್ಮದಿ, ವಿಶ್ವ ಸುಬೀಕ್ಷೆಗಾಗಿ ಅಪರಾಹ್ನ 2 ಗಂಟೆಗೆ ದಿವ್ಯ ಮಂಗಲ ಪ್ರವಚನ ಮಾಡಲಿರುವರು. ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಳ್ಳಲಿದ್ದಾರೆ. ಈ ಪುಣ್ಯ ಮಹಾಪರ್ವದಲ್ಲಿ ಸರ್ವರೂ ಭಾಗವಹಿಸುವಂತೆ ಧರಣೇಂದ್ರ ಕೆ.ಜೈನ್ ವಿನಂತಿಸಿರುತ್ತಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!