23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ MRW, URW, VRW ಇವರುಗಳ ಸಹಯೋಗದೊಂದಿಗೆ ಜಿಲ್ಲೆಯ ಯುವ ನಿರುದ್ಯೋಗಿ ವಿಕಲಚೇತನ ಉದ್ಯೋಗಾಂಕ್ಷಿಗಳಿಗೆ ಸೆ.12 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಉದ್ಯೋಗ ಪೂರ್ವ ನೋಂದಾಯಿಸುವ ಪ್ರಕ್ರೀಯೆ ಮತ್ತು ಸ್ವ-ಉದ್ಯೋಗ ಮಾಡಲು ಇಚ್ಚಿಸುವ ವಿಕಲಚೇತನ ಅಭ್ಯರ್ಥಿಗಳ ಆಯ್ಕೆಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ಗ್ರಾಮೀಣ 18 ರಿಂದ 38 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಶೈಕ್ಷಣಿಕ ದಾಖಲಾತಿಗಳ ಪ್ರತಿಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವುದರೊಂದಿಗೆ, ಸ್ಥಳೀಯ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

ವಿಕಲಚೇತನರಿಗೆ ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ (APD) ಸಂಸ್ಥೆಯು ₹10,000 ರಿಂದ ₹50,000 ರವರೆಗೆ ಉದ್ಯಮ ಬೆಂಬಲವನ್ನು ನೀಡಲಿದೆ.
ಅರ್ಹತಾ ಮಾನದಂಡಗಳು: ವಯಸ್ಸು: 18 ರಿಂದ 35 ವರ್ಷ,
ಶಿಕ್ಷಣ: ಕನಿಷ್ಟ ಹತ್ತನೇ ತರಗತಿ ಉತ್ತೀರ್ಣ, APD ಕೊಡುಗೆ: ಗರಿಷ್ಠ ರೂ.50,000, ಇಚ್ಛೆ: ಸ್ವಂತ ಉದ್ಯಮ ಪ್ರಾರಂಭಿಸಲು ನಿಜವಾದ ಆಸಕ್ತಿ ಇರಬೇಕು. ಆಸಕ್ತ ಅಭ್ಯರ್ಥಿಗಳು 12.09.2025ರಂದು ಸ್ಥಳಕ್ಕೆ ಬಂದು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 9535225693 ಸಂಪರ್ಕಿಸಬಹುದು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!