September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ MRW, URW, VRW ಇವರುಗಳ ಸಹಯೋಗದೊಂದಿಗೆ ಜಿಲ್ಲೆಯ ಯುವ ನಿರುದ್ಯೋಗಿ ವಿಕಲಚೇತನ ಉದ್ಯೋಗಾಂಕ್ಷಿಗಳಿಗೆ ಸೆ.12 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಉದ್ಯೋಗ ಪೂರ್ವ ನೋಂದಾಯಿಸುವ ಪ್ರಕ್ರೀಯೆ ಮತ್ತು ಸ್ವ-ಉದ್ಯೋಗ ಮಾಡಲು ಇಚ್ಚಿಸುವ ವಿಕಲಚೇತನ ಅಭ್ಯರ್ಥಿಗಳ ಆಯ್ಕೆಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ಗ್ರಾಮೀಣ 18 ರಿಂದ 38 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಶೈಕ್ಷಣಿಕ ದಾಖಲಾತಿಗಳ ಪ್ರತಿಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವುದರೊಂದಿಗೆ, ಸ್ಥಳೀಯ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

ವಿಕಲಚೇತನರಿಗೆ ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ (APD) ಸಂಸ್ಥೆಯು ₹10,000 ರಿಂದ ₹50,000 ರವರೆಗೆ ಉದ್ಯಮ ಬೆಂಬಲವನ್ನು ನೀಡಲಿದೆ.
ಅರ್ಹತಾ ಮಾನದಂಡಗಳು: ವಯಸ್ಸು: 18 ರಿಂದ 35 ವರ್ಷ,
ಶಿಕ್ಷಣ: ಕನಿಷ್ಟ ಹತ್ತನೇ ತರಗತಿ ಉತ್ತೀರ್ಣ, APD ಕೊಡುಗೆ: ಗರಿಷ್ಠ ರೂ.50,000, ಇಚ್ಛೆ: ಸ್ವಂತ ಉದ್ಯಮ ಪ್ರಾರಂಭಿಸಲು ನಿಜವಾದ ಆಸಕ್ತಿ ಇರಬೇಕು. ಆಸಕ್ತ ಅಭ್ಯರ್ಥಿಗಳು 12.09.2025ರಂದು ಸ್ಥಳಕ್ಕೆ ಬಂದು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 9535225693 ಸಂಪರ್ಕಿಸಬಹುದು.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
error: Content is protected !!