25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ MRW, URW, VRW ಇವರುಗಳ ಸಹಯೋಗದೊಂದಿಗೆ ಜಿಲ್ಲೆಯ ಯುವ ನಿರುದ್ಯೋಗಿ ವಿಕಲಚೇತನ ಉದ್ಯೋಗಾಂಕ್ಷಿಗಳಿಗೆ ಸೆ.12 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಉದ್ಯೋಗ ಪೂರ್ವ ನೋಂದಾಯಿಸುವ ಪ್ರಕ್ರೀಯೆ ಮತ್ತು ಸ್ವ-ಉದ್ಯೋಗ ಮಾಡಲು ಇಚ್ಚಿಸುವ ವಿಕಲಚೇತನ ಅಭ್ಯರ್ಥಿಗಳ ಆಯ್ಕೆಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ಗ್ರಾಮೀಣ 18 ರಿಂದ 38 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಶೈಕ್ಷಣಿಕ ದಾಖಲಾತಿಗಳ ಪ್ರತಿಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವುದರೊಂದಿಗೆ, ಸ್ಥಳೀಯ ಉದ್ಯೋಗಾವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

ವಿಕಲಚೇತನರಿಗೆ ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಬಿಲಿಟಿ (APD) ಸಂಸ್ಥೆಯು ₹10,000 ರಿಂದ ₹50,000 ರವರೆಗೆ ಉದ್ಯಮ ಬೆಂಬಲವನ್ನು ನೀಡಲಿದೆ.
ಅರ್ಹತಾ ಮಾನದಂಡಗಳು: ವಯಸ್ಸು: 18 ರಿಂದ 35 ವರ್ಷ,
ಶಿಕ್ಷಣ: ಕನಿಷ್ಟ ಹತ್ತನೇ ತರಗತಿ ಉತ್ತೀರ್ಣ, APD ಕೊಡುಗೆ: ಗರಿಷ್ಠ ರೂ.50,000, ಇಚ್ಛೆ: ಸ್ವಂತ ಉದ್ಯಮ ಪ್ರಾರಂಭಿಸಲು ನಿಜವಾದ ಆಸಕ್ತಿ ಇರಬೇಕು. ಆಸಕ್ತ ಅಭ್ಯರ್ಥಿಗಳು 12.09.2025ರಂದು ಸ್ಥಳಕ್ಕೆ ಬಂದು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 9535225693 ಸಂಪರ್ಕಿಸಬಹುದು.

Related posts

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!