July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಆರಂಬೋಡಿ : ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಆರಂಬೋಡಿ ಇದರ ವಾರ್ಷಿಕ ಮಹಾಸಭೆಯು ಸೆ.09 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಮಹಾ ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಆಶಾ. ಎಸ್. ಶೆಟ್ಟಿ ವಹಿಸಿದ್ದರು. ಕಾರ್ಯದರ್ಶಿ ಧನವತಿ ಪ್ರಾರ್ಥಿಸಿ, ಸ್ವಾಗತಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಮ್.ಬಿ.ಕೆ ಸುಮತಿ 2ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ , ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ , ಫಾರ್ಮ್ ಮೆನೇಜರ್ ಬಂಗಾರಪ್ಪ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಬಗ್ಗೆ, ಅದರ ದ್ಯೇಯೋದ್ದೇಶದ ಬಗ್ಗೆ, ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಇತರ ಹಲವಾರು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಪೋಷಣ ಅಭಿಯಾನದ ಬಗ್ಗೆ ಸಿಸ್ಟರ್ ಕುಸುಮಾವತಿ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಎಲ್.ಸಿ.ಆರ್.ಪಿ ಶಾರದಾ ನಿರೂಪಿಸಿ, ಪಶುಸಖಿ ಸುಭಾಷಿನಿ ಧನ್ಯವಾದವಿತ್ತರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya
error: Content is protected !!