September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಆರಂಬೋಡಿ : ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಆರಂಬೋಡಿ ಇದರ ವಾರ್ಷಿಕ ಮಹಾಸಭೆಯು ಸೆ.09 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಮಹಾ ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಆಶಾ. ಎಸ್. ಶೆಟ್ಟಿ ವಹಿಸಿದ್ದರು. ಕಾರ್ಯದರ್ಶಿ ಧನವತಿ ಪ್ರಾರ್ಥಿಸಿ, ಸ್ವಾಗತಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಮ್.ಬಿ.ಕೆ ಸುಮತಿ 2ವರ್ಷದ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು ಮಂಡಿಸಿದರು. ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ , ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ , ಫಾರ್ಮ್ ಮೆನೇಜರ್ ಬಂಗಾರಪ್ಪ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಬಗ್ಗೆ, ಅದರ ದ್ಯೇಯೋದ್ದೇಶದ ಬಗ್ಗೆ, ಜೀವನೋಪಾಯ ಚಟುವಟಿಕೆ, ಒಕ್ಕೂಟದ ಬಗ್ಗೆ, ಇತರ ಹಲವಾರು ವಿಷಯದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಮಾದಕ ಪದಾರ್ಥಗಳ ವ್ಯಸನ ಸಮಾಜದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಪ್ರತಿಜ್ಞೆಯನ್ನು ಮಾಡಿಸಿದರು. ಪೋಷಣ ಅಭಿಯಾನದ ಬಗ್ಗೆ ಸಿಸ್ಟರ್ ಕುಸುಮಾವತಿ ಮಾಹಿತಿ ನೀಡಿದರು. ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಎಲ್.ಸಿ.ಆರ್.ಪಿ ಶಾರದಾ ನಿರೂಪಿಸಿ, ಪಶುಸಖಿ ಸುಭಾಷಿನಿ ಧನ್ಯವಾದವಿತ್ತರು.

Related posts

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya
error: Content is protected !!