July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

ಕಣಿಯೂರು ಗ್ರಾಮ ಪಂಚಾಯತಿನ ೨೦೨೪-೨೫ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ೧೫ನೇ ಹಣಕಾಸು ಆಯೋಗದ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಅನುಷ್ಠಾನಗೊಳಿಸಲಾಗಿರುವ ಕಾಮಗಾರಿಗಳನ್ನು ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ವತಿಯಿಂದ ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆಯನ್ನು ಹಿರಿಯ ಪಶು ವೈದ್ಯಾಧಿಕಾರಿ ಡಾ| ವಿನಯ ಪಶು ಚಿಕಿತ್ಸಾಲಯ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ ಸಾಲ್ಯಾನ್ ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ, ಕಣಿಯೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸೀತಾರಾಮ ಮಡಿವಾಳ, ಉಪಾಧ್ಯಕ್ಷೆ ಶ್ರೀಮತಿ ಜಾನಕಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮತಿ ಬೆಂಗೈ, ಶ್ರೀಮತಿ ಗಾಯತ್ರಿ, ಕುಮಾರಿ ಮೋಹಿನಿ, ಶ್ರೀಮತಿ ಜಲಜಾಕ್ಷಿ ಹಾಗೂ ಉಮಾವತಿ, ತಾಂತ್ರಿಕ ಸಂಯೋಜಕರಾದ ಶರಣ್ ರೈ, ಹಾಗೂ ಲೀಸಾ ಡೇಸ ಹಾಗೂ ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಸಂಜೀವಿನಿ ಸದಸ್ಯರು, ಸಾಮಾಜಿಕ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಂಥಪಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಧನ್ಯವಾದವಿತ್ತರು.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!