July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 11 ರಂದು ಸಂಘದ ಸಂಗಮ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 34.21 ಕೋಟಿ ಠೇವಣಿ ಹೊಂದಿದ್ದು, ರೂ. 42.82ಕೋಟಿ ಸಾಲ ಹೊರಬಾಕಿ ಇದ್ದು ವರ್ಷಾಂತ್ಯಕ್ಕೆ ಶೇ. 99%ರಷ್ಟು ವಸೂಲಾತಿ ಆಗಿರುತ್ತದೆ. ವಾರ್ಷಿಕ ರೂ. 233.13 ಕೋಟಿ ವ್ಯವಹಾರ ನಡೆಸಿ ಗರಿಷ್ಠ ರೂ. 1,20,34,914.68 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ರಷ್ಟು ಡಿವಿಡೆಂಟ್ ನೀಡಿದೆ.

ಈ ವೆಳೆ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ , ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಗಿಂತ ಹೆಚ್ಚಿನ ಅಂಕ ಗಳಿಸಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು . ಅತೀ ಹೆಚ್ಚು ಗೊಬ್ಬರ ಖರೀದಿ ಮಾಡಿದ ಹಾಗೂ ಅತೀ ಹೆಚ್ಚು ಅಡಿಕೆ ಮಾರಾಟ ಮಾಡಿದ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲ, ನಿರ್ದೇಶಕರಾದ ವಿಠಲ ಭಂಡಾರಿ, ಉದಯ ಕುಮಾರ್, ಶ್ರೀನಾಥ್ ಬಿ., ಪದ್ಮನಾಭ್ ಗೌಡ ಕೆ., ಅಶ್ವಿನಿ ರವಿ ನಾಯ್ಕ್, ಪ್ರೇಮಾವತಿ, ಸುನಿಲ್ ಕೆ.,ರವಿಚಂದ್ರ ಪಿ, ವಿಶ್ವನಾಥ್ ಕಕ್ಕುದೋಳಿ, ಮುತ್ತಪ್ಪ, ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಹಾಗೂ ಸದಸ್ಯರು , ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಕೆ. ವಾರ್ಷಿಕ ವರದಿ ವಾಚಿಸಿ, ಗುಮಾಸ್ತ ಸುಂದರ ಗೌಡ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya
error: Content is protected !!