ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 11 ರಂದು ಸಂಘದ ಸಂಗಮ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು 34.21 ಕೋಟಿ ಠೇವಣಿ ಹೊಂದಿದ್ದು, ರೂ. 42.82ಕೋಟಿ ಸಾಲ ಹೊರಬಾಕಿ ಇದ್ದು ವರ್ಷಾಂತ್ಯಕ್ಕೆ ಶೇ. 99%ರಷ್ಟು ವಸೂಲಾತಿ ಆಗಿರುತ್ತದೆ. ವಾರ್ಷಿಕ ರೂ. 233.13 ಕೋಟಿ ವ್ಯವಹಾರ ನಡೆಸಿ ಗರಿಷ್ಠ ರೂ. 1,20,34,914.68 ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ರಷ್ಟು ಡಿವಿಡೆಂಟ್ ನೀಡಿದೆ.

ಈ ವೆಳೆ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ , ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಗಿಂತ ಹೆಚ್ಚಿನ ಅಂಕ ಗಳಿಸಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು . ಅತೀ ಹೆಚ್ಚು ಗೊಬ್ಬರ ಖರೀದಿ ಮಾಡಿದ ಹಾಗೂ ಅತೀ ಹೆಚ್ಚು ಅಡಿಕೆ ಮಾರಾಟ ಮಾಡಿದ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಾಬಲ, ನಿರ್ದೇಶಕರಾದ ವಿಠಲ ಭಂಡಾರಿ, ಉದಯ ಕುಮಾರ್, ಶ್ರೀನಾಥ್ ಬಿ., ಪದ್ಮನಾಭ್ ಗೌಡ ಕೆ., ಅಶ್ವಿನಿ ರವಿ ನಾಯ್ಕ್, ಪ್ರೇಮಾವತಿ, ಸುನಿಲ್ ಕೆ.,ರವಿಚಂದ್ರ ಪಿ, ವಿಶ್ವನಾಥ್ ಕಕ್ಕುದೋಳಿ, ಮುತ್ತಪ್ಪ, ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸಿರಾಜುದ್ದೀನ್, ಹಾಗೂ ಸದಸ್ಯರು , ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಕೆ. ವಾರ್ಷಿಕ ವರದಿ ವಾಚಿಸಿ, ಗುಮಾಸ್ತ ಸುಂದರ ಗೌಡ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya
error: Content is protected !!