July 23, 2026
ಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಅಳದಂಗಡಿ ಸರಕಾರಿ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ

ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದು ಶೈಲೇಶ್, ಮನ್ವಿತ್, ಸಾತ್ವಿಕ ಪೂಜಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಶ್ರವಂತ್ ಬೆಸ್ಟ್ ಚೇಸರ್ ಆಗಿ, ಭವಿಷ್ಯ ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾರೆ. ವಿಜೇತ ತಂಡಕ್ಕೆ ಶಾಲಾ ಮುಖ್ಯ ಶಿಕ್ಷಕರಾದ ಶಾಂತಿ ಮರಿಯ ಸಲ್ದಾನ, ದೈಹಿಕ ಶಿಕ್ಷಣ ಶಿಕ್ಷಕರಾದ ಶೇಖರ ಎನ್, ಶಾಲಾ ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷರಾದ ಸದಾಶಿವ ಪೂಜಾರಿ, ಸದಸ್ಯರಾದ ಸುರೇಶ್, ಶೇಖರ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ನಾಯಕ ಮನೋಹರ್, ಹಳೆ ವಿದ್ಯಾರ್ಥಿ ಅಭಿಷೇಕ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!