23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

ಬೆಳ್ತಂಗಡಿ : ಸ.ಪ್ರ.ದ ಕಾಲೇಜು, ಬೆಳ್ತಂಗಡಿಯಲ್ಲಿ ಮಾನವಿಕ ಸಂಘವನ್ನು ಡಾ.ಶರತ್ ಕುಮಾರ್ ಟಿ.ಕೆ., ನಿವ್ರತ್ತ ಪ್ರಾಂಶುಪಾಲರು, ಸ.ಪ್ರ.ದ ಕಾಲೇಜು ಪುಂಜಾಲಕಟ್ಟೆ, ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಜ್ಞಾನವನ್ನು ಜಾಣ್ಮೆಯಿಂದ ಬಳಸಿಕೊಂಡಾಗ ಅವಕಾಶಗಳು ನಿಮ್ಮದಾಗುತ್ತವೆ. ಶ್ರದ್ಧೆ, ಬದ್ಧತೆಯಿಂದ ಜೀವನದಲ್ಲಿ ಮುನ್ನುಗ್ಗಿದಾಗ ಯಶಸ್ಸು ತನ್ನಿಂದ ತಾನೆ ಬರುತ್ತದೆ. ಜೀವನದಲ್ಲಿ ತಿಳಿಯುವ ಕುತೂಹಲ, ಕೌತುಕ ಕಲಿಕೆಗೆ ಹಾಗೂ ಯಶಸ್ಸಿಗೆ ಪೂರಕ ಎಂದರು.

ಪ್ರೊ.ಮಾರುತಿ ಜಿ ಕ್ರಿಯಾ ಯೋಜನೆ ಬಗ್ಗೆ ಮಾತನಾಡಿದರು. ಪ್ರೊ.ರೊನಾಲ್ಡ್ ಪ್ರವೀಣ್ ಕೊರೆಯ ಮಾನವಿಕ ಸಂಘದ ಸಂಚಾಲಕರು ಪ್ರಾಸ್ತಾವಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಪ್ರೊ.ಪದ್ಮನಾಭ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ರಾಧಾಕೃಷ್ಣ ಹೆಚ್.ಬಿ, ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ರವಿ ಎಂ.ಎನ್, ಪ್ರೊ.ಸುರೇಶ್ ಡಿ, ಉಪಸ್ಥಿತರಿದ್ದರು.

ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಪ್ರೊ.ಕವಿತ, ಸ್ವಾಗತಿಸಿದರು. ಪ್ರೊ.ಸುಧಾರಾಣಿ ಎನ್. ವಂದಿಸಿದರು. ಕು.ಶ್ರುತ ಬಳಗ ತ್ರತೀಯ ಬಿ.ಎ ಪ್ರಾರ್ಥಿಸಿದರು. ಕು.ನಸೀಬಾ, ಕಾವ್ಯಶ್ರೀ ನಿರೂಪಿಸಿದರು.

Related posts

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya
error: Content is protected !!