23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಮಜ್ದೂರು ಸಂಘವು ಸದಾ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಬೃಹತ್ ರಾಷ್ಟ್ರೀಯ ಸಂಘಟನೆ. ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳನ್ನು, ಜಿಲ್ಲಾ ಘಟಕವು ತಕ್ಷಣ ಅನುಷ್ಠಾನಗೊಳಿಸಿ ಜಿಲ್ಲೆಯ ಎಲ್ಲಾ ಯೂನಿಯನ್ ಮತ್ತು ತಾಲೂಕು ಮಟ್ಟದ ಪ್ರಮುಖರಿಗೆ ತಲುಪಿಸುವ ಮಹತ್ತರ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಿದೆ.


ಆಗಸ್ಟ್ 14 ರಿಂದ ಸೆಪ್ಟೆಂಬರ್ 6 ರವರೆಗೆ ಸುಳ್ಯ, ಪುತ್ತೂರು, ಬಂಟ್ವಾಳ, ಕಡಬ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಮಂಗಳೂರು ತಾಲೂಕುಗಳಲ್ಲಿ ಸಮನ್ವಯ ಸಭೆಗಳು ಯಶಸ್ವಿಯಾಗಿ ನಡೆದವು.
ಈ ಸಭೆಗಳಲ್ಲಿ ನೂರಾರು ಕಾರ್ಮಿಕ ಪ್ರತಿನಿಧಿಗಳು ಭಾಗವಹಿಸಿ ರಾಜ್ಯ ಮಟ್ಟದ ನಿರ್ಧಾರಗಳನ್ನು ಚರ್ಚಿಸಿ, ತಮ್ಮ ಸ್ಥಳೀಯ ಸಮಸ್ಯೆಗಳನ್ನೂ ಹಂಚಿಕೊಂಡರು.


ಪ್ರತಿ ಸಭೆಯಲ್ಲಿ ಕಾರ್ಯಕರ್ತರಿಗೆ ಸಂಘಟನೆಯ ಸಿದ್ಧಾಂತ, ಹೋರಾಟದ ಇತಿಹಾಸ ಹಾಗೂ ಮುಂದಿನ ಹಾದಿಯ ಬಗ್ಗೆ ಪ್ರೇರಣಾದಾಯಕ ಚರ್ಚೆಗಳು ನಡೆಯಿತು. ಕಾರ್ಮಿಕರ ಏಕತೆ, ಶಕ್ತಿ, ಸ್ವಾಭಿಮಾನ ಇವುಗಳೇ ಸಮಾಜ ಪರಿವರ್ತನೆಗೆ ದಾರಿ ಎಂದು ಒತ್ತಿಹೇಳಲಾಯಿತು.


ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಸಂಘಟನಾ ಕಾರ್ಯದರ್ಶಿಗಳಾದ ವಸಂತ್ ಕುಮಾರ್ ಮನಿಹಳ್ಳ ಮತ್ತು ಕುಮಾರ್ ನಾಥ್ ಉಜಿರೆ ಅವರ ನೇತೃತ್ವದಲ್ಲಿ ಹಾಗೂ ರಾಜ್ಯ ಪದಾಧಿಕಾರಿಗಳಾದ ಸತೀಶ್ ಶೆಟ್ಟಿ ಮತ್ತು ಜಯರಾಜ್ ಸಾಲ್ಯಾನ್ ಇವರ ಮಾರ್ಗದರ್ಶನದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಶಿಸ್ತಿನಿಂದ ಮತ್ತು ಶ್ರದ್ಧೆಯಿಂದ ನೆರವೇರಿಸಲ್ಪಟ್ಟವು.

Related posts

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya
error: Content is protected !!