32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮ

ವೇಣೂರು: ಹಿಂದೂ ಎನ್ನುವುದು ಜಾತಿಯಲ್ಲ, ಅದೊಂದು ಆದರ್ಶ ವ್ಯಕ್ತಿತ್ವ. ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕನಾಗುವವನೇ ಹಿಂದೂ. ಹಿಂದೂ ಧರ್ಮವು ವ್ಯಕ್ತಿಯನ್ನು ದೈವಿಕ ಶಕ್ತಿಯೊಂದಿಗೆ ಸಂಪರ್ಕಿಸಲು ಸಹಾಯ ಮಾಡುವ ಹಲವು ಆಚರಣೆಗಳನ್ನು ಒಳಗೊಂಡಿದೆ. ಉದಾಹರಣೆಗೆ, ಬೆಳಿಗ್ಗೆ ಕರ ದರ್ಶನ ಮಾಡುವುದು, ಊಟಕ್ಕೆ ಮೊದಲು ಅನ್ನಪೂರ್ಣ ದೇವಿಗೆ ಪ್ರಾರ್ಥಿಸುವುದು, ಮತ್ತು ಸಂಜೆ ತುಳಸಿ ಮಾತೆಗೆ ದೀಪ ಹಚ್ಚುವುದು.

ಧರ್ಮ ಶಿಕ್ಷಣದ ಕೊರತೆಯಿಂದಾಗಿ ಹಿಂದೂ ಸಮಾಜ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಂಧಾನುಕರಣೆ ಮಾಡುತ್ತಿದ್ದು, ಇದು ಯುವ ಪೀಳಿಗೆಯನ್ನು ದಾರಿತಪ್ಪಿಸುತ್ತಿದೆ.
ಮನುಷ್ಯ ಜನ್ಮದ ಅಂತಿಮ ಗುರಿ ಈಶ್ವರ ಪ್ರಾಪ್ತಿ. ಹಿಂದೂ ಧರ್ಮದ ನಾಲ್ಕು ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮತ್ತು ಮೋಕ್ಷಗಳಲ್ಲಿ, ಧರ್ಮ ಶಿಕ್ಷಣದ ಕೊರತೆಯಿಂದಾಗಿ ಧರ್ಮ ಮತ್ತು ಮೋಕ್ಷ ಕಣ್ಮರೆಯಾಗುತ್ತಿವೆ. ಇದರಿಂದ ಜನರು ಈಶ್ವರ ಪ್ರಾಪ್ತಿಯ ಗುರಿಯಿಂದ ದೂರವಾಗುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕ ಗುರುಪ್ರಸಾದ ಗೌಡ ತಿಳಿಸಿದರು.

ವೇಣೂರಿನ ಗೋಳಿಯಂಗಡಿಯ ದೇವಾಡಿಗರ ಸಮುದಾಯ ಭವನದಲ್ಲಿ ಸ್ಥಳೀಯ ಧರ್ಮಪ್ರೇಮಿಗಳ ಸಹಭಾಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಧಾರ್ಮಿಕ ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ವೇಣೂರಿನ ಹರೀಶ ಶೆಟ್ಟಿ, ಸೋಮನಾಥ , ಸಂದೀಪ, ಸೀತಾರಾಮ ಆಚಾರ್ಯ, ಲಕ್ಷ್ಮಣ ಮುಂತಾದ 400ಕ್ಕೂ ಅಧಿಕ ಹಿಂದುತ್ವನಿಷ್ಠರು ಭಾಗಿಯಾಗಿದ್ದರು.

Related posts

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya
error: Content is protected !!